ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಳ ಕಡಿತ :  ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ – vishwanews24

Featured, ದಕ್ಷಿಣ ಕನ್ನಡ

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಳ ಕಡಿತ :  ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ

ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಾಕೀತು ಮಾಡಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳುಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು – vishwanews24

ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸೂರಜ್ ರೇವಣ್ಣ ಪ್ರಕರಣ : ನಮಗೆ ಅಧಿಕೃತ ದೂರು ಬಂದಿಲ್ಲ , ಬಂದ ಕೂಡಲೇ ಕ್ರಮ : ಪರಮೇಶ್ವರ್‌ – vishwanews24

Leave a Reply