ಬೆಳ್ತಂಗಡಿ: ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ : ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ : ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ

ಬೆಳ್ತಂಗಡಿ: ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 ರಂದು ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ವರಿಷ್ಠಾಧಿಕಾರಿ( ಎಸ್.ಪಿ.) ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.

ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳು ಖಾಲಿ :  ಕೂಡಲೇ ಅರ್ಜಿ ಸಲ್ಲಿಸಿ – Vishwanews24

ಇನ್ನು ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಆಧಾರ್ ಕಾರ್ಡ, ಇತರೆ ದಾಖಲೆಗಳನ್ನು ಪರಿಶೀಲಿಸಿ, ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದೆ.

ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಬಕ್ತರು ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಸೂಕ್ತ ಎಚ್ಚರಿಕೆ ನೀಡಿ ತೆರಳಿರುವುದಾಗಿ ವರದಿಯಾಗಿದೆ.

ಉಡುಪಿ: ಶೈಕ್ಷಣಿಕ ವರ್ಷದ ಅಂತಿಮ ಹಂತ -: ಕಾಲೇಜು ವಿದ್ಯಾರ್ಥಿಗಳಿಗೆ ಸಿಗದ ಟ್ಯಾಬ್‌ – Vishwanews24

Leave a Reply