ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ – ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ; ಉದ್ಯಮಿ ಪ್ರಜ್ವಲ್ ನಾಯಕ್ ಸಾವು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ  – ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಉದ್ಯಮಿ ಪ್ರಜ್ವಲ್ ನಾಯಕ್ ಸಾವು

ಬೆಳ್ತಂಗಡಿ : ಮುಂಜಾನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ಉದ್ಯಮಿಯೊಬ್ಬರು ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ನಿವಾಸಿ ಉದ್ಯಮಿ ಪ್ರಜ್ವಲ್ ನಾಯಕ್(35) ಎಂದು ಗುರುತಿಸಲಾಗಿದೆ. ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ, ಉದ್ಯಮಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ. ಪ್ರಜ್ವಲ್ ಕೂಡಾ ಉದ್ಯಮಿಯಾಗಿದ್ದು, ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲಕರಾಗಿದ್ದರು.

ಕಾರ್ಕಳ: ಬೈಕ್ ಪಲ್ಟಿ – ನವವಿವಾಹಿತೆ ಸ್ಥಳದಲ್ಲಿಯೇ  ಮೃತ್ಯು – vishwanews24

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬೆಂಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಬೀದಿ ದೀಪದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವೃತೆಗೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಅವರನ್ನು ಕೂಡಲೇ ಸ್ಥಳೀಯರ ಸಹಕಾರದಿಂದ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾರ್ಕಳ: ಬೈಕ್ ಪಲ್ಟಿ – ನವವಿವಾಹಿತೆ ಸ್ಥಳದಲ್ಲಿಯೇ  ಮೃತ್ಯು – vishwanews24

Leave a Reply