ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ‌ ಸಲ್ಲಿಕೆ – Vishwanews24

Featured, ಉಡುಪಿ

ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ‌ ಸಲ್ಲಿಕೆ

ಕುಂದಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ‌ ಕೆ.‌ಗೋಪಾಲ ಪೂಜಾರಿ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಪಕ್ಷದ ಟಿಕೆಟ್ ಅಪೇಕ್ಷಿಸುವ ಅಪೇಕ್ಷಿತರು ಕೆಪಿಸಿಸಿ ಕಚೇರಿಗೆ ನಿಯಮ‌ ಪ್ರಕಾರ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24

ಈ ಸಂದರ್ಭದಲ್ಲಿ ಸಹೋದರ ಕೆ ಮಾಧವ ಪೂಜಾರಿ, ಪುತ್ರ ಪವನ್ ಜಿ ಪೂಜಾರಿ ಹಾಗೂ ಇತರರು ಇದ್ದರು.

ಈ ಕುರಿತು ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತನಾಡಿದ ಮಾಜಿ ಶಾಸಕ ಗೋಪಾಲ ಪೂಜಾರಿ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಹಿತೈಷಿಗಳ ಅಭಿಪ್ರಾಯವನ್ನು ಪಡೆದು ಈ ಬಾರಿಯ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿ‌ ಪಕ್ಷದ ನಿಯಮದಂತೆ ಅರ್ಜಿ‌ ಸಲ್ಲಿಸಿದ್ದೇನೆ. ಪಕ್ಷ ಪರಿಗಣಿಸುವ ವಿಶ್ವಾಸವಿದೆ. ಕ್ಷೇತ್ರದ ಜನ ಆಶೀರ್ವಾದ ಮಾಡಿದ್ದಲ್ಲಿ ಇನ್ನೊಮ್ಮೆ ಬೈಂದೂರು ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ದುಡಿಯಲು ಬದ್ದನಾಗಿರುವುದಾಗಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24

Leave a Reply