ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದವರಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ : ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

Featured, ರಾಜ್ಯ ನ್ಯೂಸ್

ಗಾಂಧೀಜಿ, ಪಟೇಲ್‌, ನೆಹರೂ, ಬೋಸ್‌ಗಿಂತ ಬಿಜೆಪಿಯವರು ದೊಡ್ಡವರೇ? : ಪ್ರಿಯಾಂಕ್‌ ಕಿಡಿ

ಬೆಂಗಳೂರು: ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ ಭಾರತದ ವಿದೇಶಾಂಗ ನೀತಿಯ ವೈಫಲ್ಯಗಳ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಂದೇ ಮಾತರಂ ಗೀತೆಯ 2 ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, 1937ರಲ್ಲೇ ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ 8 ಜನ ರಾಷ್ಟ್ರನಾಯಕರು ಸಭೆ ಸೇರಿ ಎರಡು ಚರಣಗಳನ್ನು ಹಾಡಲು ನಿರ್ಧರಿಸಿದ್ದರು. ಇವರಿಗಿಂತ ದೊಡ್ಡವರು ಬಿಜೆಪಿಯವರಾ ಎಂದು ಪ್ರಶ್ನಿಸಿದರು.

ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗತವೈಭವ ತರುವುದೊಂದೇ ನನ್ನ ಉದ್ದೇಶ : ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ – vishwanews24

ಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯ. ನೇತಾಜಿ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೇನೆ ಕಟ್ಟುತ್ತಿದ್ದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಹಾಗೂ ಸಾವರ್ಕರ್ ಬ್ರಿಟಿಷ್ ಸೇನೆಗೆ ಜನರನ್ನು ಸೇರಿಸುತ್ತಿದ್ದರು. ಬ್ರಿಟಿಷರಿಂದ 60 ರೂಪಾಯಿ ಪಿಂಚಣಿ ಪಡೆಯುತ್ತಿದ್ದವರಿಂದ ಇಂದು ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.

ಮುಲ್ಕಿ : ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ – vishwanews24

Leave a Reply