ಭಗತ್ ಸಿಂಗ್, ನಾರಾಯಣಗುರು ಪಾಠ ತೆಗೆದುಹಾಕಿಲ್ಲ :  ಸಚಿವ ಆರ್. ಅಶೋಕ್ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ..

ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ..

ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ..

ಬೆಂಗಳೂರು : ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.

ಪಠ್ಯಪುಸ್ತಕ ವಿವಾದ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಅನೇಕ ಜನರನ್ನು ಮತಾಂತರ ಮಾಡಿದ್ದ ಎಂದರು.

ನಮ್ಮ ಸರ್ಕಾರದಲ್ಲಿ ಭಗತ್ ಸಿಂಗ್, ನಾರಾಯಣಗುರು ಪಠ್ಯವನ್ನು ತೆಗೆದುಹಾಕಿಲ್ಲ. ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಸಿಂಧು ಸಂಸ್ಕೃತಿ ಕುರಿತ ಪಾಠ ಕೈಬಿಡಲಾಗಿತ್ತು. ನಿಟ್ಟೂರು ಶ್ರೀನಿವಾಸರಾಯರ ಪಾಠವನ್ನು ಕೈಬಿಡಲಾಗಿತ್ತು. ನಮ್ಮ ಸರ್ಕಾರ ರಾಣಿ ಚನ್ನಬೈರಾದೇವಿ ಅವರ ಪಾಠವನ್ನು ಸೇರಿಸಲಾಗಿದೆ ಎಂದರು.

ಹಿಂದಿನ ಸರ್ಕಾರವು ಕೆಲವು ಪಠ್ಯಗಳನ್ನು ತೆಗೆದು ಹಾಕಿದ್ದಾವೆ. ಇವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟವಿರಲ್ಲ. ಹಿಂದೆ ಅವರಿಗೆ ಬೇಕಾದಂತೆ ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರದ ಪಠ್ಯಪರಿಷ್ಕರಣೆ ಅವಧಿಯಲ್ಲಿ ಕುವೆಂಪು ಅವರ 8 ಪದ್ಯಗಳನ್ನು ಸೇರಿಸಲಾಗಿದೆ. ಹಿಡನ್ ಅಜೆಂಟ್ ಇರುವ ಕೆಲ ಸಾಹಿತಿಗಳು ಭ್ರಮೆಯಲ್ಲಿದ್ದಾರೆ. ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲ ಪಠ್ಯ ಪುಸ್ತಕಗಳು ಬದಲಾವಣೆಯಾಗಿವೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಯಾರೂ ಯಾಕೆ ಧ್ವನಿ ಎತ್ತಲಿಲ್ಲ ಎಂದು ಹೇಳಿದ್ದಾರೆ.

ನಿತಿನ್ ಗಡ್ಕರಿ ಗಡುವು ಮುಗಿದರೂ ಕಾರ್ಯಾಚರಿಸುತ್ತಿರುವ ಸುರತ್ಕಲ್ ಟೋಲ್ ಗೇಟ್ – Vishwanews24

Leave a Reply