ಭಟ್ಕಳ : ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24
ಭಟ್ಕಳ : ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ : ಕೋಟ ಶ್ರೀನಿವಾಸ ಪೂಜಾರಿ
ಭಟ್ಕಳ : ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು.
ಅವರು ಮಂಗಳವಾರ ಮುರ್ಡೇಶ್ವರದಲ್ಲಿ ಏರ್ಪಡಿಸಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.
ಮುರ್ಡೇಶ್ವರದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ. ಇಲ್ಲಿಂದಲೇ ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆಯುವ ದೃಢ ಸಂಕಲ್ಪ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಸಾಧನೆ ಕುರಿತು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತೆರಳಿ ತಿಳಿಸುವ ಕೆಲಸ ಮಾಡಬೇಕು ಎಂದರು.
ಕೇರಳ : ಹಕ್ಕಿ ಜ್ವರ ಹೆಚ್ಚಳ : ನೂರಾರು ಕೋಳಿಗಳ ಮಾರಣಹೋಮ – Vishwanews24
ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ, ಆಯುಷ್ಮಾನ್ ಭಾರತ ಹಾಗೂ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಪರಿಶಿಷ್ಟಪಂಗಡ, ಪರಿಶಿಷ್ಟಜಾತಿ, ಹಿಂದುಳಿದವರು, ರೈತರು, ದಲಿತರು, ಮೀನುಗಾರರು, ನೇಕಾರರು, ಟೈಲರ್ಗಳಿಗೆ ಮಹತ್ವದ ಯೋಜನೆಗಳನ್ನು ಜಾರಿಗೆಗೊಳಿಸಿ ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನೀಲ ನಾಯ್ಕ ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಸ್ವಾಗತಿಸಿದರು. ಶಿವಮೊಗ್ಗದ ಗಿರೀಶ ಪಟೇಲ್ ನಿರ್ವಹಿಸಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮಡಪ್ಪ ವಂದಿಸಿದರು.
