ಭಾರತವನ್ನು ಬಲಿಷ್ಠ ದೇಶವಾಗಿಸಲು ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು : ಸುರೇಶ್ ಕುಮಾರ್ – Vishwanews24
ಮಂಗಳೂರು : ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತವನ್ನು ಬಲಿಷ್ಠ ದೇಶವಾಗಿಸಲು ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮತ್ತೊಮ್ಮೆ ಪ್ರಚಂಡ ಬಹುಮತದ ಸರ್ಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದರು.
ನಗರದ ಚಿಲಿಂಬಿಗುಡ್ಡೆಯ ಶ್ರೀ ರಾಮಾಂಜನೇಯ ಯುವಕ ಮಂಡಲದ ಸಭಾಂಗಣದಲ್ಲಿ ಮಂಗಳವಾರ ನಡೆದ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. 1996ನೇ ಇಸವಿಯಿಂದ ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದ.ಕ.ಜಿಲ್ಲೆಯಿಂದ ದೊಡ್ಡ ಮಟ್ಟಿನ ಅಪೇಕ್ಷೆ ಇಡಲಾಗಿದೆ. ಜನಸಾಮಾನ್ಯರಿಂದ ಹಿಡಿದು ಸೈನಿಕರವರೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ ಏಕೈಕ ಪ್ರಧಾನಿ ಮೋದಿ ಎಂದು ಸುರೇಶ್ ಕುಮಾರ್ ಹೇಳಿದರು.
