ಮಂಗಳೂರು : PFI ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ -Vishwanews24
ಮಂಗಳೂರು : PFI ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ -Vishwanews24
ಮಂಗಳೂರು : ಇಡಿ ತನಿಖೆಯ ವಿರುದ್ಧ ಮಂಗಳೂರಿನ ಜಿಲ್ಲಾಡಳಿತದ ಮುಂಭಾಗದಲ್ಲಿ ಪಿಎಫ್ಐ ಕಾರ್ಯಕರ್ತರು ನಡೆಸುತ್ತಿದ್ದಂತ ಪ್ರತಿಭಟನೆ, ವ್ಯಾಪಕ ಸ್ವರೂಪ ಪಡೆದಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಕಚೇರಿಗೂ ಕಾರ್ಯಕರ್ತರು ಮುತ್ತಿಗೆ ಯತ್ನ ಕೂಡ ನಡೆಸಿದ್ದಾರೆ.
ನಗರದಲ್ಲಿ ಇಂದು PFI ಮುಂಖಡರ ಮೇಲೆ ಇಡಿ ತನಿಖೆಗೆ ವಿರೋಧಿಸಿ, ಪಿಎಫ್ಐ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಫ್ಐ ಕಾರ್ಯಕರ್ತರು ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿದ್ದಂತ ಪೊಲೀಸರು, ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.
