ಮಂಗಳೂರು: ಅಕ್ರಮ ಮರಳುಗಾರಿಕೆ : 11 ದೋಣಿಗಳು ಪೊಲೀಸರ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಅಕ್ರಮ ಮರಳುಗಾರಿಕೆ : 11 ದೋಣಿಗಳು ಪೊಲೀಸರ ವಶಕ್ಕೆ – Vishwanews24

ಮಂಗಳೂರು: ಫೈಸಲ್‌‌ ನಗರದ ಸಮೀಪ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ 11 ದೋಣಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರಾವಳಿ ನಿಯಂತ್ರಣ ವಲಯಗಳಿಂದ ಮರಳುಗಾರಿಕೆ ಕೈಗೊಳ್ಳಲು ಹಾಗೂ ಸಾಗಿಸಲು ಜಿಲ್ಲಾಡಳಿತ ಇನ್ನು ಪರವಾನಗಿ ನೀಡಿಲ್ಲ. ಆದರೆ, ಕೆಲವು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ಧಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಡಿಸಿಪಿ ಹರಿರಾಂ ಶಂಕರ್‌ ಹಾಗೂ ಕಂಕನಾಡಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ. ಈ ವೇಳೆ ಮರಳುಗಾರಿಕೆಯಲ್ಲಿ ತೊಡಗಿದೆಯೆನ್ನಲಾದ 11 ಬೋಟ್‌‌ಗಳನ್ನು ವಶಕ್ಕೆ ಪಡೆದಿದ್ದು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದೆ.

130 ಕೋಟಿ ಜನರು ಆಯ್ಕೆ ಮಾಡಿದ ಪ್ರಧಾನ ಮಂತ್ರಿಗಿಂತ ಈತ ದೊಡ್ಡವನಾ ? : ಸಿದ್ದರಾಮಯ್ಯಗೆ ಶ್ರೀರಾಮುಲು ತಿರುಗೇಟು -Vishwanews24