ಮಂಗಳೂರು: ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರು ದುರುಪಯೋಗಪಡಿಸಿ ದೇಣಿಗೆ ಸಂಗ್ರಹಿಸಿ ವಂಚಿಸುತ್ತಿದ್ದ ಇಬ್ಬರು ಯುವಕರ ಸೆರೆ – vishwanews24
ಮಂಗಳೂರು: ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರು ದುರುಪಯೋಗಪಡಿಸಿ ದೇಣಿಗೆ ಸಂಗ್ರಹಿಸಿ ವಂಚಿಸುತ್ತಿದ್ದ ಇಬ್ಬರು ಯುವಕರ ಸೆರೆ
ಮಂಗಳೂರು : ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಣಿಗೆ ಸಂಗ್ರಹಿಸುತ್ತಿದ್ದ ಇಬ್ಬರು ಯುವಕರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ, ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದರು.
ಯುವಕರು ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಹೆಸರಲ್ಲಿ ನಿಡ್ಲೆ ಗ್ರಾಮದ ಧನುಷ್ ಎಂಬವರ ಬಳಿ ದೇಣಿಗೆ ಕೇಳಿದ್ದಾರೆ. ಅನುಮಾನಗೊಂಡ ಧನುಷ್ ಸಂಸ್ಥೆಯ ಮೊಬೈಲ್ ನಂಬರ್ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಸಂಸ್ಥೆಯವರು ನಾವು ಯಾರನ್ನೂ ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುಬ್ರಹ್ಮಣ್ಯ: ಡಿ. 10ರಿಂದ 24ರ ವರೆಗೆ ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ – vishwanews24
ವಿಷಯ ತಿಳಿದ ಕೂಡಲೆ ಧನುಷ್ ಸೇರಿದಂತೆ ಸುತ್ತಮುತ್ತಲಿನ ಜನರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿತರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಯುವಕರಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದನು. ಸದ್ಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
