ಮಂಗಳೂರು – ಆಟೋ ರಿಕ್ಷಾ ಸ್ಫೋಟ  ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್ ; ಭಾರತವನ್ನು ಇಸ್ಲಾಂ ರಾಷ್ಟ್ರವಾಗಿ ಮಾಡುವ ಗುರಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು – ಆಟೋ ರಿಕ್ಷಾ ಸ್ಫೋಟ  ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್ ..

ಭಾರತವನ್ನು ಇಸ್ಲಾಂ ರಾಷ್ಟ್ರವಾಗಿ ಮಾಡುವ ಗುರಿ..

ಶಾರಿಕ್ ಸಹೋದರಿಯರ ಖಾತೆಗೆ ಲಕ್ಷ- ಲಕ್ಷ ಹಣ..

ಶಾರಿಕ್ ಸಂಪರ್ಕಿತ ರುಹಲ್ಲಾ ಬೆಂಗಳೂರಲ್ಲಿ ಅರೆಸ್ಟ್..

ಬೆಂಗಳೂರು: ಮಂಗಳೂರು ಆಟೋ ರಿಕ್ಷಾ ಸ್ಫೋಟ  ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬ್ಲಾಸ್ಟ್‌ಗೆ ಬೆಂಗಳೂರಿನಿಂದಲೂ ಲಿಂಕ್ ಇದೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

ಶಾರೀಕ್ ಸಂಪರ್ಕಿತ ರುಹುಲ್ಲಾ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಕೆಜಿ ಹಳ್ಳಿ ಸಮೀಪ ರುಹಲ್ಲಾ ಮೊಬೈಲ್ ಲೋಕೇಷನ್ ಪತ್ತೆಯಾಗಿದೆ. ಅಲ್ಲಿಗೆ ಭೇಟಿ ನೀಡಿ, ತನಿಖೆ ನಡೆಸಿದ ಪೊಲೀಸರು ಮೊಬೈಲ್  ಲ್ಯಾಪ್‌ಟಾಪ್  ಪರಿಶೀಲಿಸಿದಾಗ ಶಾರೀಕ್ ಜೊತೆ ರುಹುಲ್ಲಾ ನಿರಂತರ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಬಳಿಕ ಶಂಕಿತ ರುಹಲ್ಲಾನನ್ನು ಮೈಸೂರು ಪೊಲೀಸರು  ಬಂಧಿಸಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ಜ್ಯೂ.ರಿಷಬ್​ ಶೆಟ್ಟಿ.. 💥 ಉಡುಪಿಯಲ್ಲಿ ಹವಾ ಸೃಷ್ಟಿಸುತ್ತಿರುವ ಶಿರ್ವದ ಪ್ರದೀಪ್ ಆಚಾರ್ಯ – Vishwanews24

ಆತ್ಮಾಹುತಿ ಬಾಂಬ್ ಹಿಂದಿನ ರಹಸ್ಯ ಬಯಲು: ಶಾರಿಕ್ ತನ್ನ ಸ್ನೇಹಿತ ಮಾಝ್ ಬಂಧನ ಸಹಿಸದ ಪ್ರತೀಕಾರಕ್ಕೆ ಇಳಿದು, ಬಾಂಬ್ ಸ್ಫೋಟಿಸಲು ಮುಂದಾಗಿದ್ದ. ಗುರು ಯಾಸೀನ್, ಸ್ನೇಹಿತ ಮಾಝ್ ಬಂಧನದ ಸೇಡಿಗೆ ಪ್ರತೀಕಾರ ತೀರಿಸಿಕೊಳ್ಳಲು ಹೀಗೆ ಮಾಡಿದ್ದ. ಅಲ್ಲದೇ, ಈ ಮೂವರು ಭಾರತವನ್ನು ಇಸ್ಲಾಂ ರಾಷ್ಟ್ರವಾಗಿ ಮಾಡುವ ಗುರಿ ಹೊಂದಿದ್ದರು ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

ಲಕ್ಷ-ಲಕ್ಷ ಹಣ: ಬಾಂಬ್ ಬ್ಲಾಸ್ಟ್  ಪ್ರಕರಣದ ಬಳಿಕ ಶಾರಿಕ್ ಸಹೋದರಿಯರ ಖಾತೆಗೆ ಲಕ್ಷ- ಲಕ್ಷ ಹಣ ಹರಿದುಬಂದಿದೆ ಎಂದು ಹೇಳಲಾಗುತ್ತಿದೆ. ಇಷ್ಟೊಂದು ಹಣ ಶಾರೀಕ್‌ಗೆ ಬರುತ್ತಿದ್ದಿದ್ದು ಎಲ್ಲಿಂದ? ಭಾರತವನ್ನು ಟಾರ್ಗೆಟ್ ಮಾಡಿ ವಿದೇಶದಿಂದ ಫಂಡಿಂಗ್ ಮಾಡ್ತಿದ್ದಾರಾ? ಶಾರಿಕ್‌ಗೂ ವಿದೇಶದಿಂದಲೇ ಫಂಡಿಂಗ್ ಮಾಡಲಾಗುತ್ತಿತ್ತು ಅನ್ನೋ ಅನುಮಾನ ವ್ಯಕ್ತವಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಮಂಗಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ .. 🌐 ವಾಹನ ಸಂಚಾರ ನಿಷೇಧ – ಬದಲಿ ಮಾರ್ಗಕ್ಕೆ ಆದೇಶ – Vishwanews24

Leave a Reply