ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ: ಅರಣ್ಯಾಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ – Vishwanews24
ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ: ಅರಣ್ಯಾಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್ ಕೊಂಚಾಡಿ ನಿವಾಸಿ ಎಸ್.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ – Vishwanews24
ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶುಕ್ರವಾರದಂದು ಅಪರಾಧಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1.50 ಕೋ.ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಮತ್ತೆ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಪೊಲೀಸ್ ನಿರೀಕ್ಷಕ ಉದಯ ಎಂ.ನಾಯಕ್ ದೂರು ದಾಖಲಿಸಿದ್ದರು. ಪೊಲೀಸ್ ಉಪಾಧೀಕ್ಷಕ ವಿಟuಲ್ದಾಸ್ ಪೈ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣ : 13 ಮಂದಿಗೆ ಜಾಮೀನು – Vishwanews24
