ಮಂಗಳೂರು: ಇಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ -vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಇಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ಮಧ್ಯಾಹ್ನ 12.10ಕ್ಕೆ ಮಂಗಳೂರಿಗೆ ಆಗಮಿಸುವವರು. ಆ ಬಳಿಕ ರಸ್ತೆ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವವರು. ಆನಂತ ಬೆಳ್ತಂಗಡಿಯಲ್ಲಿ ನಡೆಯಲಿರುವ ಮಾಜಿ ಶಾಸಕ ದಿ. ವಸಂತ ಬಂಗೇರಾ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕ  ಮೃತ್ಯು – vishwanews24

ಅಲ್ಲಿಂದ ಮಂಗಳೂರಿಗೆ ಆಗಮಿಸಿ ರಾತ್ರಿ 7 ಕ್ಕೆ ಟಿಎಂಪೈ ಸಭಾಂಗಣದಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಿಎಂ ಜತೆ ಡಿಸಿಎಂ ಹಾಗೂ ಹಲವು ಸಚಿವರು ಕೂಡಾ ಭಾಗವಹಿಸಲಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸುವ ಸಾಧ್ಯತೆ ಇದೆ.

ಹಲವಾರು ಪ್ರಮುಖ ಗಣ್ಯರು ಮಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಾಹನದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಮಂಗಳೂರು: ಭಾರೀ ಮಳೆಗೆ ರಾಜಕಾಲುವೆಗೆ ಉರುಳಿ ಬಿದ್ದ ಆಟೋ : ಚಾಲಕ ಸಾವು – vishwanews24

Leave a Reply