ಮಂಗಳೂರು: ಕದ್ರಿ ದೇವಸ್ಥಾನ ಟಾರ್ಗೆಟ್ ಎಂಬ ಉಗ್ರರ ಪೋಸ್ಟ್  ; ಸತ್ಯಾಸತ್ಯತೆಯ ಬಗ್ಗೆ ತನಿಖೆ -ಎಡಿಜಿಪಿ ಅಲೋಕ್ ಮೋಹನ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕದ್ರಿ ದೇವಸ್ಥಾನ ಟಾರ್ಗೆಟ್ ಎಂಬ ಉಗ್ರರ ಪೋಸ್ಟ್  ; ಸತ್ಯಾಸತ್ಯತೆಯ ಬಗ್ಗೆ ತನಿಖೆ -ಎಡಿಜಿಪಿ ಅಲೋಕ್ ಮೋಹನ್

ಮಂಗಳೂರು: ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ವೊಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್ ಕುರಿತ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಪರಿಶೀಲನೆಯ ನಂತರ ತನಿಖೆಯ ಫಲಿತಾಂಶವನ್ನು ಬಯಲು ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ : ನಾಲ್ವರಿಗೆ ಗಾಯ – Vishwanews24

ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ‘ನಮ್ಮ ಗುರಿ ಇದ್ದದ್ದು ಕದ್ರಿ ದೇವಸ್ಥಾನ. ಆದರೆ ನಿರ್ದಿಷ್ಟ ಸಮಯಕ್ಕೆ ಗುರಿ ತಲುಪಲು ಸಾಧ್ಯವಾಗಲಿಲ್ಲ ಎಂದು ಉಲ್ಲೇಖವಿದೆ ಎನ್ನಲಾಗಿದೆ.

ಇವತ್ತು ನಮ್ಮ ಸಹೋದರನ ಪರಿಸ್ಥಿತಿ ನೊಡಿ ಸಂಭ್ರಮಿಸುತ್ತಿರುವ ಅದರಲ್ಲೂ ವಿಶೇಷವಾಗಿ ಎಡಿಜಿಪಿ ಅಲೋಕ್ ಕುಮಾರ್ ಅವರ ಸಂತೋಷವು ಅಲ್ಪಕಾಲದ್ದಾಗಿದೆ. ನೀವು ಕೂಡಾ ನಮ್ಮ ಟಾರ್ಗೆಟ್ ಲೀಸ್ಟ್‌ನಲ್ಲಿ ಇದ್ದೀರಿ’ ಎಂದು ಉಲ್ಲೇಖ ಮಾಡಲಾಗಿತ್ತು.

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ : ನಾಲ್ವರಿಗೆ ಗಾಯ – Vishwanews24

Leave a Reply