ಮಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರ್ವರಿಗೂ ಉಚಿತ ಲಸಿಕೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರ್ವರಿಗೂ ಉಚಿತ ಲಸಿಕೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ -Vishwanews24

ಮಂಗಳೂರು: “ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ” ಎಂಬುವುದನ್ನು ಕೇಂದ್ರ ಸರ್ಕಾರ ಪ್ರಚಾರ ಮಾಡುತ್ತಿದೆ, ಆದರೆ ವಾಸ್ತವ ಹೇಗಿದೆ ಅಂದರೆ ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಮೂಲಕ 850 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಉಚಿತ ಲಸಿಕೆಯ ಜಾಹೀರಾತಿನ ಕೆಳಗಡೆ ದ.ಕ.ಜಿಲ್ಲಾ ಕಾಂಗ್ರೆಸ್ ಕೋವಿಡ್ 19 ಹೆಲ್ಪ್ ಲೈನ್ ವತಿಯಿಂದ ಸಂಚಾಲಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೋವಿಡ್ ಲಸಿಕೆ ವಿಚಾರದಲ್ಲಿ ವ್ಯಾಪಾರೀಕರಣ ಮಾಡದೆ ಸರ್ವರಿಗೂ ಉಚಿತ ಲಸಿಕೆ ನೀಡಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ನಡೆದ ವಿಶಿಷ್ಟ ಪ್ರತಿಭಟನಾ ಸಭೆ ನಡೆಯಿತು.

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವರಾದ ಯು.ಟಿ.ಖಾದರ್ ರವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಮುಖಂಡರಗಳಾದ ಶಶೀಧರ್ ಹೆಗ್ಡೆ, ನವೀನ್ ಡಿ’ಸೋಜಾ, ಮಹಮ್ಮದ್ ಕುಂಜತ್ತಬೈಲ್, ಶಾಹುಲ್ ಹಮೀದ್, ಅಪ್ಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.ಸರಕಾರ ಕೋವಿಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದೆ. ಲಸಿಕೆಯನ್ನು ಭಾರತದ ಪ್ರತಿಯೊಬ್ಬ ಪ್ರಜೆಗಳಿಗೂ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆ. ಈ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಗೀತಾ ಅತ್ತಾವರ್, ಶೋಭಾ ಕೇಶವ್ , ಕುಮಾರಿ ಅಪ್ಪಿ, ಸಂಜನಾ ಚಲವಾದಿ, ಪ್ರವೀತಾ , ಥೆರೇಸಾ ಮುಂತಾದವರು ಭಾಗವಹಿಸಿದರು.