ಮಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ – Vishwanews24
ಮಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ
ಮಂಗಳೂರು: ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆ. 30ರ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕರಾದ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ನಂತರ ಮೈಸೂರಿನಿಂದ ನೇರ ಪ್ರಸಾರವಾಗುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ವೀಕ್ಷಿಸಿದರು. ನೂರಾರು ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವನಿಕರು ಭಾಗವಹಿಸಿದ್ದರು.
ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..Vishwanews24
