ಮಂಗಳೂರು ಗೋಲಿಬಾರ್‌ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ : ಸರ್ಕಾರ – Vishwanews24

Featured, ರಾಜ್ಯ ನ್ಯೂಸ್

ಮಂಗಳೂರು ಗೋಲಿಬಾರ್‌ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ : ಸರ್ಕಾರ – Vishwanews24

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.

ಗೋಲಿಬಾರ್ ಘಟನೆ ಸಂಬಂಧ ‌ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ಮ್ಯಾಜಿಸ್ಟ್ರೇಟ್ ತನಿಖಾ ವರದಿ ಹೇಳಿದೆ. ಆ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಂಡಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.

ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.

2019ರ ಡಿಸೆಂಬರ್ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಲಭೆ ಉಂಟಾಗಿತ್ತು. ಈ ವೇಳೆ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.

ಬೆಂಗಳೂರು : 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ – Vishwanews24