ಮಂಗಳೂರು ಚೂರಿ ಪ್ರಕರಣ : ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಚೂರಿ ಪ್ರಕರಣ : ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಮಸೀದಿ ಮುಂಭಾಗ ವಿಜಯೋತ್ಸವ ಆಚರಣೆ, ಚೂರಿ ಇರಿತ ಪ್ರಕರಣ ಸಂಬಂಧ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿ ಮಾತನಾಡಿದ ಅವರು, ಇಂತಹ ಪ್ರಕರಣಗಳಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಘಟನೆಗೆ ಕಾರಣ ಏನೇ ಇರಬಹುದು. ಆದರೆ ಕಾನೂನು ಕೈಗೆ ತೆಗೆದುಕೊಂಡಾಗ ಕ್ಷಮಿಸುವುದಕ್ಕೆ ಆಗೋದಿಲ್ಲ. ಕೆಲವರು ಪ್ರಚೋದನೆ ಮಾಡಿರಬಹುದು, ಆದರೆ ಸಂಯಮ ಕಾಪಾಡೋದು ನಮ್ಮ ಜವಾಬ್ದಾರಿ. ಕಾನೂನು ಕೈಗೆ ತೆಗೆದುಕೊಂಡವರ ಮೇಲೆ ಕಾನೂನು ಕ್ರಮ ಆಗಲೇಬೇಕು. ಇಂತಹ ಘಟನೆಗಳಾದಾಗ ಸರಕಾರ, ರಾಜಕಾರಣಿಗಳು ತಟಸ್ಥವಾಗಿರಬೇಕು. ಆ ಕೆಲಸ ನಾವು ಮಾಡುತ್ತೇವೆ ಎಂದರು.

ಕೊಲೆ ಪ್ರಕರಣ : ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ – vishwanews24

 

Leave a Reply