ಮಂಗಳೂರು: ಜುವೆಲ್ಯರಿ ಅಂಗಡಿ ಸಿಬ್ಬಂದಿ ಕೊಲೆ, ದರೋಡೆ ಪ್ರಕರಣ : ಆಟೋ ಚಾಲಕನ ವಿಚಾರಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಜುವೆಲ್ಯರಿ ಅಂಗಡಿ ಸಿಬ್ಬಂದಿ ಕೊಲೆ, ದರೋಡೆ ಪ್ರಕರಣ : ಆಟೋ ಚಾಲಕನ ವಿಚಾರಣೆ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಅಂಗಡಿಯ ಸಿಬ್ಬಂದಿಯಾಘಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಅಂಗಡಿ ದರೋಡೆ ನಡೆಸಿ , ಮುಸುಕುಧಾರಿಯಾಗಿದ್ದ ಆರೋಪಿ ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು.

ಪಾಂಗಾಳ : ಚೂರಿಯಿಂದ ಇರಿದು ಯುವಕನ ಕೊಲೆ -Vishwanews24

ಆರೋಪಿ ಯಾವ ಕಡೆ ಹೋಗಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply