ಮಂಗಳೂರು : ಜೂ.16ರಂದು ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಯಾರಿಗೂ ಅನುಮತಿ ನೀಡಿಲ್ಲ : ಸಹಾಯಕ ಪೊಲೀಸ್ ಆಯುಕ್ತರ ಸ್ಪಷ್ಟನೆ – Vishwnaews24
ಜೂ.16ರಂದು ಪ್ರತಿಭಟನೆ ನಡೆಸುವ ಬಗ್ಗೆ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ..
ಮಂಗಳೂರು, : ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇದರ ವಿರುದ್ಧ ಜೂ.16ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ.
ಅಲ್ಲದೆ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಯಾರಿಗೂ ಅನುಮತಿ ನೀಡಿಲ್ಲ ಎಂದು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ
ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದ್ದು, ಇದನ್ನು ಖಂಡಿಸಿ ಜೂ.16ರಂದು ಅಪರಾಹ್ನ 3 ಗಂಟೆಗೆ ನಗರದ ಪಿವಿಎಸ್ ವೃತ್ತದ ಬಳ ವಿಶ್ವ ಹಿಂದೂ ಪರಿಷತ್-ಬಜರಂಗ ದಳ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸ್ಆಯಪ್ ಗ್ರೂಪ್ಗಳಲ್ಲಿ ಪೋಸ್ಟ್ ವೊಂದು ಹರಿದಾಡುತ್ತಿದೆ. ಇದನ್ನು ಗಮನಿಸಿ ಸಹಾಯಕ ಪೊಲೀಸ್ ಆಯುಕ್ತರು ಈ ಸ್ಪಷ್ಟನೆ ನೀಡಿದ್ದಾರೆ.
ಜೂ.16ರಂದು ಪ್ರತಿಭಟನೆ ನಡೆಸುವ ಕುರಿತು ಪೊಲೀಸ್ ಇಲಾಖೆಗೆ ಅಧಿಕೃತವಾಗಿ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ. ಆದಾಗ್ಯೂ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತರು ಹೇಳಿದ್ದು, ಈ ಬಗ್ಗೆ ಅವರು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಿಗೆ ತಿಳುವಳಿಕೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
