ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು – Vishwanews24
ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು
ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಲ್ಪೆ : ಬಂದರಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು – Vishwanews24
