ಮಂಗಳೂರು: ಡಿಸಿಪಿ ನೇತೃತ್ವದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ : ಇಬ್ಬರ ಬಂಧನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಡಿಸಿಪಿ ನೇತೃತ್ವದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ : ಇಬ್ಬರ ಬಂಧನ – Vishwanews24

ಮಂಗಳೂರು: ಉಚ್ಚಿಲ ಪೆರಿಂಬೈಲ್‌ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಡಿಸಿಪಿ ಹರಿರಾಂ ಶಂಕರ್‌ ನೇತೃತ್ವದ ಪೊಲೀಸ್‌‌ ತಂಡ ದಾಳಿ ನಡೆಸಿದ್ದು, 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.

ಕಲ್ಲಾಪು ನಿವಾಸಿ ಮಯ್ಯದ್ದಿ, ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತರು. ಈ ಪ್ರದೇಶದಲ್ಲಿ ತಡರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ವ್ಯಾಪಕಗೊಂಡ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ವತಃ ಡಿಸಿಪಿ ಅವರೇ ಸ್ಥಳೀಯ ಪೊಲೀಸರ ನೆರವಿನಲ್ಲಿ ಅಕ್ರಮ ಮರಳು ಅಡ್ಡೆಗೆ ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಎಂಟು ಮಂದಿ ಪರಾರಿಯಾಗಿದ್ದಾರೆ.

ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕೊಲ್ಲೂರು ಶ್ರೀ‌ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ‌ ನೀಡಿದ ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮೀ – Vishwanews24