ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ 

ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ.

ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ ಮಾಡಿಕೊಂಡವರು.

ಗಿರಿಧರ್ ಅವರು ಕೊಡಿಯಾಲಬೈಲಿನ ಬ್ಯಾಂಕ್ ಒಂದರಲ್ಲಿ ಅಟೆಂಡರ್ ಕೆಲಸ ನಿರ್ವಹಿಸುತ್ತಿದ್ದು ಇತ್ತೀಚಿಗೆ ನಿವೃತ್ತರಾಗಿದ್ದರು, ಆದರೆ ಆ ಬಳಿಕವೂ ಬ್ಯಾಂಕ್‌ಗೆ ಬಂದು ಹೋಗುತ್ತಿದ್ದರು ಅದರಂತೆ ಬುಧವಾರವೂ ಬಂದಿದ್ದ ಅವರು ಮನೆಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ಬಂದರು ಠಾಣೆಗೆ ದೂರು ನೀಡಿದ್ದರು.

ಅಮಿತಾಬ್ ಬಚ್ಚನ್ ಧ್ವನಿಯಲ್ಲಿದ್ದ ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್ ಇಂದಿನಿಂದ ಸ್ಥಗಿತ – vishwanews24

ಗುರುವಾರ ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿ ಸ್ಟೋರ್ ರೂಂ ತೆರೆದಾಗ ಅಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗಿರಿಧರ್ ದೇಹ ಪತ್ತೆಯಾಗಿದೆ.

ಪವರ್ ಲಿಫ್ಟರ್ ಆಗಿದ್ದ ಯಾದವ್ ಹಲವು ಪದಕಗಳನ್ನು ಪಡೆದಿದ್ದರು ಎಂದು ಹೇಳಲಾಗಿದ್ದು ಇತ್ತೀಚಿಗೆ ಹಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಘಟನೆ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಸ್ವಾಗತಿಸಿದ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ – vishwanews24

Leave a Reply