ಮಂಗಳೂರು: ನಾಳೆ ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಭೇಟಿ : ಸಂಜೆ 3ರಿಂದ 7ರವರೆಗೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನಾಳೆ ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಭೇಟಿ : ಸಂಜೆ 3ರಿಂದ 7ರವರೆಗೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ – Vishwanews24

ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಅ.13ರಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಬುಧವಾರ ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ.

ಇನ್ನು ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.