ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24
ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ಮಂಗಳೂರು: ಇಲ್ಲಿನ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿಗಳಿಬ್ಬರು ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಕ್ಟೋಬರ್ 10ರಂದು ನಡೆದಿದೆ.
ಮೃತರನ್ನು ಮಂಗಳೂರು ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಸೌಮ್ಯ ನಾಯಕ್ (35) ಎಂದು ಗುರುತಿಸಲಾಗಿದೆ.
ಬಂಟ್ವಾಳ: ಅಪರಿಚಿತ ಯುವತಿಯ ಮೃತದೇಹ ಪತ್ತೆ – Vishwanews24
ಒಂದೂವರೆ ವರ್ಷದ ಹಿಂದೆ ಇಬ್ಬರೂ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಮರೋಳಿಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

