ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಬಾಲಕರ ಬಂಧನ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಅಪ್ರಾಪ್ತ ಬಾಲಕರ ಬಂಧನ -Vishwanews24

ಮಂಗಳೂರು : ಪಂಪ್ ವೆಲ್ ನಲ್ಲಿ ಇತ್ತೀಚೆಗೆ ಪತ್ತೆಯಾದ ಲಾಕ್ ಡೌನ್ ಬೇಕು ಹಾಗೂ ಇತರ ಕೆಲವು ಆಕ್ಷೇಪಾರ್ಹ ಸಂದೇಶಗಳಿದ್ದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.

ಇವರು ನಗರದ ಕಾಲೇಜೊಂದರ ವಿದ್ಯಾರ್ಥಿಗಳು. ಲಾಕ್ ಡೌನ್ ಆದರೆ ಎಕ್ಸಾಮ್ ಮುಂದಕ್ಕೆ ಹೊಗುತ್ತದೆ ಎಂಬ ಉದ್ದೇಶದಿಂದ ಬರೆದಿದ್ದೇವೆ ಎಂಬುದಾಗಿ ಆರೋಪಿಗಳು ಹೇಳಿದ್ದಾರೆ. ಇದರ ಹಿಂದೆ ಬೇರೆ ಯಾರಾದರೂ ಇದ್ಧಾರೆಯೆ ಎಂಬ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿರುವುದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.

ಲಾಕ್‌ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24