ಮಂಗಳೂರು: ಪಣಂಬೂರು ಬೀಚ್ ನಲ್ಲಿ ಬೆಂಗಳೂರು ಮೂಲದ ಇಬ್ಬರ ಶವ ಪತ್ತೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಬೆಂಗಳೂರು ಮೂಲದ ಇಬ್ಬರ ಶವ ಪತ್ತೆ: ಆತ್ಮಹತ್ಯೆ ಶಂಕೆ

ಮಂಗಳೂರು: ಪಣಂಬೂರು ಬಳಿಯ ಸಮುದ್ರ ತೀರದಲ್ಲಿ ಇಬ್ಬರ ಮೃತದೇಹ ಪತ್ತೆಯಾದ ಘಟನೆ ಅ.19 ರ ಗುರುವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂಬಂಧದಲ್ಲಿ ಇಬ್ಬರು ಅತ್ತಿಗೆ ಹಾಗೂ ಭಾವ ಎಂದು ತಿಳಿದು ಬಂದಿದೆ.

ಬೆಂಗಳೂರು ಮೂಲದರಾಗಿರುವ ಇವರು ಮನೆಯಲ್ಲಿ ಯಾರಿಗೂ ಹೇಳದೇ ಬಂದಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಶವಗಳನ್ನು ಮೇಲೆತ್ತಿದ್ದು, ಶವಾಗಾರದಲ್ಲಿ ಇಡಲಾಗಿದೆ.

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲು – Vishwanews24

 

Leave a Reply