ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ ! – Vishwnaews24

Featured, ದಕ್ಷಿಣ ಕನ್ನಡ

ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ – Vishwnaews24

ಮಂಗಳೂರು: ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು.

ಇನ್ನು ಬಸ್‌ ನಿಲ್ದಾಣದಲ್ಲಿ ಪಿಲಿಕುಳದ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ ಬರದಿದ್ದಾಗ ಪತಿ ಕೂಡಲೇ ಶಿಲ್ಪಾ ಅವರ ಮೊಬೈಲ್‌ಗೆ ಕರೆ ಮಾಡಿದರೂ, ಆಕೆ ಉತ್ತರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಶಿಲ್ಪಾ ಅವರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರದ ಟಾಪ್‌ ಮತ್ತು ಹಸುರು ಬಣ್ಣದ ಪ್ಯಾಂಟ್‌ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ (0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಮೈಸೂರು : ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ : ಪ್ರಧಾನಿ – Vishwanews24

Leave a Reply