ಮಂಗಳೂರು: ಬಜಪೆ ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಡ: 30 ಮಂದಿಯ ರಕ್ಷಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಜಪೆ ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಡ: 30 ಮಂದಿಯ ರಕ್ಷಣೆ

ಮಂಗಳೂರು: ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದ ಫ್ಲ್ಯಾಟ್‌ನಲ್ಲಿ ಇದ್ದಕಿದ್ದಂತೆ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ.

ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ದಟ್ಟವಾದ ಹೊಗೆ ಮೇಲಿನ ಮಹಡಿಗಳಲ್ಲಿ ಆವರಿಸಿತ್ತು. ಕೊಠಡಿಗಳಲ್ಲಿ ಹೊಗೆ ತುಂಬಿದಾಗ ಘಟನೆಯ ಬಗ್ಗೆ ಮೇಲ್ಗಡೆ ಇದ್ದವರ ಗಮನಕ್ಕೆ ಬಂದಿತ್ತು. ಗಾಬರಿಗೊಂಡ ಅವರು ಕೂಡಲೇ ನೆರವಿಗಾಗಿ ಬೊಬ್ಬೆ ಹಾಕಿದರು. ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.

ಸುನಿಲ್ ಕುಮಾರ್ ನೇತೃತ್ವದಲ್ಲಿ ನಾರಾಯಣ ಗುರು ನಿಗಮ ಸ್ಥಾಪನೆಗೆ ಸಿಎಂಗೆ ಮನವಿ – Vishwanews24

ಇಡೀ ಫ್ಲ್ಯಾಟ್‌ನಲ್ಲಿ ಹೊಗೆ ಆವರಿಸಿದ್ದರಿಂದ ಕೂಡಲೇ ಆಪತ್ಭಾಂಧವ ಗುರುಪುರದ ರಫೀಕ್‌ ಅವರನ್ನು ಕರೆಸಿ ಅವರ ಜತೆ ಸ್ಥಳೀಯರೂ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲಾ 30 ಜನರನ್ನು ರಕ್ಷಿಸಿದರು. ವಿದ್ಯುತ್‌ ಮೀಟರ್‌ ಬೋರ್ಡ್‌ ಸುಟ್ಟು ಹೋಗಿದ್ದರಿಂದ ಫ್ಲ್ಯಾಟ್‌ನಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿತ್ತು.

ಹಾಗಾಗಿ ಮೊಬೈಲ್‌ ಪೋನ್‌ಗಳ ಬೆಳಕಿನಲ್ಲಿಯೇ ಸಂಪೂರ್ಣ ಕಾರ್ಯಾಚರಣೆ ನಡೆಸಲಾಯಿತು. ಅಪಾರ್ಟ್‌ಮೆಂಟ್‌ ನ ಕೊಠಡಿಗಳಲ್ಲಿ ಸಿಲುಕಿದ್ದವರನ್ನು ಮುಖಕ್ಕೆ ಬಟ್ಟೆ ಕಟ್ಟಿ ಉಸಿರಾಟಕ್ಕೆ ತೊಂದರೆಯಾಗದಂತೆ ಹೊಗೆಯಿಂದ ರಕ್ಷಿಸಿ ಕೆಳಗಡೆ ಕರೆದೊಯ್ಯಲಾಯಿತು.

ಕೆಲವರು ಅಲ್ಪ ಸ್ವಲ್ಪ ಉಸಿರಾಟದ ಅನುಭವಿಸಿದರೂ ಬಳಿಕ ಚೇತರಿಸಿಕೊಂಡಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಸುಮಾರು 10 ವರ್ಷ ಹಳೆಯ ಫ್ಲ್ಯಾಟ್‌ ಆಗಿದ್ದು, 21 ಮನೆಗಳಿವೆ. ಬೆಂಕಿ ಅಪಘಾತ ಸಂಭವಿಸಿದಾಗ ಐದಾರು ಮನೆಗಳಲ್ಲಿ ಮಾತ್ರ ಜನರಿದ್ದರು.

ಕಾರ್ಕಳ: ಕಮರಿಗೆ ಬಿದ್ದ ಕಾರು : ಪ್ರಯಾಣಿಕರ ರಕ್ಷಣೆಗೆ ಧಾವಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

Leave a Reply