ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮತ್ತೊಂದು ಅಪಘಾತ – ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು – Vishwanews24
ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮತ್ತೊಂದು ಅಪಘಾತ – ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರ ಮೇಲೆ ಹರಿದು ಸಾವನಪ್ಪಿದ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಂಕನಾಡಿ ಕಡೆಗೆ ಚಲಿಸುತ್ತಿದ್ದ ಸಿಟಿ ಬಸ್ ಬೆಂದೂರ್ವೆಲ್ನಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಮಹಿಳೆಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಡಬ: ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ 10ನೇ ತರಗತಿ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ – Vishwanews24
ಸ್ಥಳೀಯರ ಪ್ರಕಾರ ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದ್ದು,. ಬೆಂದೂರುವೆಲ್ ಜಂಕ್ಷನ್ನಲ್ಲಿ ಒಂದು ವಾರದೊಳಗೆ ಇದು ಎರಡನೇ ಸಾವಾಗಿದೆ ಮಾರ್ಚ್ 24 ರಂದು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ನಂತರ 11 ವರ್ಷದ ಬಾಲಕನ ಮೇಲೆ ಬಸ್ಸು ಹರಿದಿತ್ತು.
ಮೃತ ಮಹಿಳೆ ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.
ಅಪರಾಧ ಮತ್ತು ಟ್ರಾಫಿಕ್ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಗೀತಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
