ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೆ ನಳಿನ್ ಕಟೀಲ್ ಅಭ್ಯರ್ಥಿ ಎಂಬರ್ಥದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿರುವುದು ದಕ್ಷಿಣ ಕನ್ನಡದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ.

ಮಂಗಳೂರಿನಲ್ಲಿ ನಡೆದಂತಹ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಸಂಸದ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ – vishwanews24

ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿ ವಲಯದಲ್ಲೇ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿ ಸ್ಥಾನಕ್ಕೆ ಭಾರೀ ಪರ-ವಿರೋಧಗಳು ಕೇಳಿ ಬಂದಿತ್ತು. ಈ ಬಾರಿಯಾದರೂ ಅಭ್ಯರ್ಥಿಯನ್ನು ಬದಲಿಸಲೇಬೇಕೆಂದು ಬಿಜೆಪಿಯೊಳಗೆ ಅಸಮಧಾನದ ಮಾತುಗಳು ಕೇಳಿ ಬರುತ್ತಿದೆ. ಸದ್ಯ ಭಾರೀ ಗೊಂದಲದ ಗೂಡಾಗಿರುವ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇಂದು ರಾಜ್ಯಾಧ್ಯಕ್ಷರ ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ.

ಮೂಳೂರು: ಕಾರು ಢಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು – vishwanews24

Leave a Reply