ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ಇತ್ತು ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಂದಿರ ನಿರ್ಮಾಣ ವಿಚಾರಕ್ಕೆ ಹಿಂದೂ ಪರ ಸಂಘಟನೆ ಇಂದು ಗಣಹೋಮ ನೆರವೇರಿಸಿದೆ. ಗಣಹೋಮದ ಮೂಲಕ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.

ಮಂಗಳೂರು ತಾಲೂಕಿನ ಮಳಲಿ ಪ್ರದೇಶದಲ್ಲಿರುವ ಮಸೀದಿ ಒಳಗಡೆ ಮಂದಿರದ ರಚನೆ ಕಂಡು ಬಂದಿತ್ತು. ಮಸೀದಿ ನವೀಕರಣದ ವೇಳೆ ಮಂದಿರ ರಚನೆಯ ಕುರುಹು, ದೇವಸ್ಥಾನದ ಗರ್ಭ ಗುಡಿಯನ್ನು ಹೋಲುವ ರಚನೆ ಪತ್ತೆಯಾಗಿತ್ತು. ಇದಾದ ಬಳಿಕ ಈ ವಿಚಾರ ವಿವಾದಕ್ಕೆ ಕಾರಣವಾಯಿತು. ನ್ಯಾಯಾಲಯದ ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯ ಮೊರೆ ಹೋಗಿದ್ದ ಹಿಂದೂ ಸಂಘಟನೆಗಳು, ಕಳೆದ ಮೇ ತಿಂಗಳಿನಲ್ಲಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟರು. ಪ್ರಶ್ನೆ ಚಿಂತನೆಯಲ್ಲಿ ಗಣಯಾಗ ನಡೆಸಲು ಸಲಹೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಳಲಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಗಣಹೋಮದ ಮೂಲಕ ಮಂದಿರ ನಿರ್ಮಾಣಕ್ಕೆ ದೇವರ ಅನುಗ್ರಹ ಪಡೆಯಲಾಗಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಗಣಹೋಮ ನಡೆದಿದೆ. ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ, ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್ ಸೇರಿದಂತೆ ಹಲವು ಮಂದಿ ಹಿಂದೂ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.

ಉಡುಪಿ: ಕೃಷ್ಣ ಮೂರ್ತಿ ಆಚಾರ್ಯ‌ರಿಗೆ ಟಿಕೆಟ್ ಸಿಗಲೆಂದು ಅಭಿಮಾನಿಗಳಿಂದ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ – Vishwanews24

 

Leave a Reply