ಮಂಗಳೂರು : ಮಸೂದ್ ಹತ್ಯೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಮಸೂದ್ ಹತ್ಯೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಮಂಗಳೂರು: ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ.

ಆರೋಪಿಗಳಾದ ಅಭಿಲಾಷ್‌, ಸುನಿಲ್‌ ಕೆ., ಸುಧೀರ್‌, ಶಿವಪ್ರಸಾದ್‌, ರಂಜಿತ್‌ ಬಿ., ಸದಾಶಿವ ಪೂಜಾರಿ, ರಂಜಿತ್‌, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು.

ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉಡುಪಿ: ಹಿಂದೂ ರಾಷ್ಟ್ರ ಮಾಡುವುದಾಗಿ ಬ್ಯಾನರ್ ಹಾಕಿದ ವ್ಯಕ್ತಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ : ಅಮೃತ್ ಶೆಣೈ – Vishwanews24

Leave a Reply