ಮಂಗಳೂರು : ಮಹಾನಗರ ಪಾಲಿಕೆ ಬೋಳೂರು ವಾರ್ಡ್ ಕಾರ್ಪೊರೇಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – vishwanews24
ಮಂಗಳೂರು : ಮಹಾನಗರ ಪಾಲಿಕೆ ಬೋಳೂರು ವಾರ್ಡ್ ಕಾರ್ಪೊರೇಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ನ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾಗಿದ್ದಾರೆ.
ಜಗದೀಶ್ ಶೆಟ್ಟಿ ಅವರು ಬೆಳಗ್ಗಿನಿಂದಲೇ ಯಾರ ಮೊಬೈಲ್ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಸಂಶಯಗೊಂಡ ಮನೆಯವರು ಜನಪ್ರತಿನಿಧಿಗಳಿಗೆ ತಿಳಿಸಿದ್ದು, ಬಳಿಕ ಮೊಬೈಲ್ ಟವರ್ ಲೊಕೇಶನ್ ಆಧಾರದ ಮೇಲೆ ಹುಡುಕಿದಾಗ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ಲೊಕೇಶನ್ ಕಂಡುಬಂದಿದೆ. ತಕ್ಷಣ ಅಲ್ಲಿಗೆ ತೆರಳಿದಾಗ ಕಾರಿನೊಳಗೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದರು.
ಅಕ್ಕಪಕ್ಕದವರಿಗೆ ವಿಷಯ ತಿಳಿದು ಕಾರಿನ ಗಾಜನ್ನು ಒಡೆದು ಜಗದೀಶ್ ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಸೇರಿಸುವ ವೇಳೆಗೆ ವಿಷ ಸೇವನೆ ಮಾಡಿ 2-3 ಗಂಟೆ ಆಗಿರಬಹುದು ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿತಿ ತುಸು ಗಂಭೀರವಾಗಿದ್ದರೂ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಇತರ ಜನಪ್ರತಿನಿಧಿಗಳು, ಮುಖಂಡರು ಭೇಟಿ ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
