ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ  : ಜಿಲ್ಲಾಧಿಕಾರಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ  : ಜಿಲ್ಲಾಧಿಕಾರಿ

ಮಂಗಳೂರು :ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ.

Surathkal toll gate cancelled : ಸತತ ಹೋರಾಟಕ್ಕೆ ಮಣಿದ ಕೇಂದ್ರ: ಸುರತ್ಕಲ್ ಟೋಲ್  ಗೇಟ್ ರದ್ದು | Central Government Order to Cancel Surathkal Toll Gate Nalin  Kumar Kateel Tweet - Kannada Oneindia

ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ 10 ದಿನಗಳಾದರೂ ಇನ್ನೂ ಕೂಡ ವಾಹನಗಳಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ಬುಧವಾರ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತು. ‘ನಿಯೋಗವು ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ವಾಹನಗಳಿಂದ ಸುಂಕ ಸಂಗ್ರಹವನ್ನು ಸ್ಥಗಿತಗೊಳಿಸಲು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಜಂಟಿ ವೇದಿಕೆಯ ಪ್ರಕಟಣೆ ತಿಳಿಸಿದೆ.

ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24

ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..

 

 

 

 

Leave a Reply