ಮಂಗಳೂರು : ಮೊಬೈಲ್ ಕದ್ದನೆಂದು ಆರೋಪಿಸಿ ಮೀನುಗಾರನನ್ನು ಬಂದರ್ ನಲ್ಲಿ  ತಲೆಕೆಳಗೆ ತೂಗು ಹಾಕಿ ಹಲ್ಲೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ಮೊಬೈಲ್ ಕದ್ದನೆಂದು ಆರೋಪಿಸಿ ಮೀನುಗಾರನನ್ನು ಬಂದರ್ ನಲ್ಲಿ  ತಲೆಕೆಳಗೆ ತೂಗು ಹಾಕಿ ಹಲ್ಲೆ – Vishwanews24

ಮಂಗಳೂರು: ನಗರದ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ.

ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್ ನ ಕ್ರೇನ್ ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ‌ಹಿಂಸಿಸುತ್ತಿರುವ ಹಾಗೂ ಹೊಡೆಯುವಂತೆ ಪ್ರೇರೆಪಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸ್ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು , ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ : ಶೋಭಾ ಕರಂದ್ಲಾಜೆ – Vishwanews24