ಮಂಗಳೂರು: ರೈಲಿನಡಿಗೆ ಬಿದ್ದು ನವವಿವಾಹಿತ ಸಾವು – Vishwanews24
ಮಂಗಳೂರು: ರೈಲಿನಡಿಗೆ ಬಿದ್ದು ನವವಿವಾಹಿತ ಸಾವು
ಮಂಗಳೂರು : ಚಲಿಸುತ್ತಿರುವ ರೈಲಿನಡಿಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ನಿನ್ನೆ ಮುಂಜಾನೆ ನಡೆದಿದೆ.
ಮೃತರನ್ನು ಜಪ್ಪಿನಮೊಗರು ತಂದೊಳಿಗೆ ನಿವಾಸಿ ಧೀರಜ್( 32) ಎಂದು ಗುರುತಿಸಲಾಗಿದೆ. ಈತನಿಗೆ 10 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಜಪ್ಪುವಿನಲ್ಲಿ ಪತ್ನಿಯೊಂದಿಗೆ ವಾಸವಿದ್ದರು.
ಬೆಳಗ್ಗೆ 6.50ಕ್ಕೆ ಮನೆಯಿಂದ ಹೊರಟು ಬಂದಿದ್ದು, ಸುಮಾರು 7 ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಜಾವಿನ ವೇಳೆ ತಿಂಡಿ ತರುತ್ತೇನೆ ಎಂದು ಮನೆಯಿಂದ ಹೊರಟಿದ್ದರು ಎನ್ನಲಾಗಿದೆ. ಧೀರಜ್ ಅವರು ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
