ಮಂಗಳೂರು- ಮಡಗಾಂವ್ ವಂದೇಭಾರತ್ ಎಕ್ಸಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವಂದೇ ಭಾರತ್ ಎಕ್ಸ್ ‌ಪ್ರೆಸ್ ರೈಲಿಗೆ ಚಾಲನೆ

ಮಂಗಳೂರು : ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣ ದಿಂದ ಮಡಗಾಂವ್ ಗೆ ಶನಿವಾರ 12.13ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ.

ಪ್ರಯಾಣ ಆರಂಭದ ಸಮಯ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದ್ದರೂ ನಂತರ 10.30 ಎಂದು ಬದಲಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2 ಅಮೃತ್ ಭಾರತ್ ರೈಲುಗಳಿಗೆ ಏಕ ಕಾಲದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು.

ಉಡುಪಿ : ಪೆರಂಪಳ್ಳಿ ಉಪಚುನಾವಣೆಯ ಗೆಲುವು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ : ಹರ್ಷ ವ್ಯಕ್ತ ಪಡಿಸಿದ ಯಶ್ ಪಾಲ್ ಸುವರ್ಣ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್, ದೇಶದಲ್ಲಿ 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಅದ್ಭುತ ಪರಿವರ್ತನೆ , ಆಮೂಲಾಗ್ರ ಬದಲಾವಣೆ ಆಗಿದೆ ಎಂದರು.

ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ಬೇಡಿಕೆ ಇದೆ. ರೈಲ್ವೇ ಹಳಿ ವಿದ್ಯುದೀಕರಣ ಆಗುತ್ತಿದೆ. ಮಾರ್ಚ್ ನಲ್ಲಿ ಪೂರ್ಣ ಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಎಪ್ರಿಲ್ ನಲ್ಲಿ ಬೆಂಗಳೂರಿಗೆ ವಂದೇ ಭಾರತ್ ಆರಂಭವಾಗಲಿದೆ ಎಂದು ನಳಿನ್ ಹೇಳಿದರು.

ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, 35 ವರ್ಷಗಳಲ್ಲಿ ಹೊಸ ಪ್ಲ್ಯಾಟ್ ಫಾರ್ಮ್ ಆಗಿರಲಿಲ್ಲ. ಇದೀಗ 4 ಮತ್ತು 5 ಪ್ಲ್ಯಾಟ್ ಫಾರ್ಮ್ ಆಗಿದೆ. ಇದು ಅಭೂತಪೂರ್ವ ಅಭಿವೃದ್ಧಿ ಎಂದು ಹೇಳಿದರು.

ರಾಮನೂರು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಾ. ಭಾರತ್ ಶೆಟ್ಟಿ, ಉಪ ಮೇಯರ್ ಸುನೀತ, ಮನಪಾ ಸದಸ್ಯ ವಿನಯ್ ರಾಜ್, ಪಾಲ್ಘಾಟ್ ರೈಲ್ವೆಯ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್ ಉಪಸ್ಥಿತರಿದ್ದರು

Leave a Reply