ಮಂಗಳೂರು: ಶಿರಾಡಿ ರಸ್ತೆ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಶಿರಾಡಿ ರಸ್ತೆ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ -Vishwanews24

ಮಂಗಳೂರು, : ರಾಷ್ಟ್ರೀಯ ಹೆದ್ದಾರಿ 75 (48) ರ ಬೆಂಗಳೂರು – ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಲ್‌ವರೆಗಿನ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್‌. ಗಿರೀಶ್‌ ಆದೇಶಿಸಿದ್ದಾರೆ.

ಜುಲೈ 22 ರಂದು ದೋಣಿಗಲ್‌ ಬಳಿ ಭೂ ಕುಸಿತದ ಹಿನ್ನೆಲೆ ಭಾರಿ ವಾಹನಗಳ ಸಂಚಾರ ಜಿಲ್ಲಾಧಿಕಾರಿ ನಿಷೇಧಿಸಿದ್ದರು ಈಗ ರಸ್ತೆ ದುರಸ್ತಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಬಹುದೆಂದು ಎನ್‌ಎಚ್‌ಎಐ ಎಂಜಿನಿಯರುಗಳು ಶಿಫಾರಸು ಮಾಡಿದ್ದರು.ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಪೊಲೀಸ್‌ ಇಲಾಖೆಯ ವತಿಯಿಂದ ಸಿಬಂದಿಯನ್ನು ನಿಯೋಜಿಸಲು ಪೊಲೀಸ್‌ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಕೋವಿಡ್‌ 19 : ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ -Vishwanews24