ಮಂಗಳೂರು: ಹೃದಯಾಘಾತ – ಮಲಗಿದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ  ಸಾವು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಹೃದಯಾಘಾತ – ಮಲಗಿದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ  ಸಾವು

ಮಂಗಳೂರು: ಹೃದಯಾಘಾತದಿಂದ  ದ್ವಿತೀಯ ಪಿಯುಸಿ  ವಿದ್ಯಾರ್ಥಿನಿ ಮಲಗಿದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ.

ಹಫೀಜಾ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ನೆಕ್ಕಿಲಾಡಿ ಕುರ್ವೇಲು ನಿವಾಸಿಯಾದ ಉದ್ಯಮಿ ದಾವೂದ್ ಎಂಬವರ ಪುತ್ರಿ. ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ಹಫೀಜಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

Karnataka Budget – ಸಾಲ ಮರುಪಾವತಿ ಮಾಡುವ ‘ಮಹಿಳೆ’ಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯ : ಸಿಎಂ ಘೋಷಣೆ- Vishwanews24

ಹಫೀಜಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾರಣ ತಡ ರಾತ್ರಿವರೆಗೂ ಅಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಗುರುವಾರ ಕೂಡ ತಡ ರಾತ್ರಿವರೆಗೂ ಓದಿಕೊಕೊಂಡು ಮಲಗಿದ್ದಾಳೆ. ಆದರೆ ಮುಂಜಾನೆ ಮಲಗಿದ್ದಲ್ಲಿಂದ ಎದ್ದೇಳಲೇ ಇಲ್ಲ, ಇದನ್ನ ಮನೆಯವರು ಗಮನಿಸಿದ್ದಾರೆ. ಬಳಿಕ ಮಲಗಿದಲ್ಲಿಯೇ ಹಫೀಜಾ ಮೃತಪಟ್ಟಿರುವುದು ತಿಳಿದುಬಂದಿದೆ.

Leave a Reply