ಮಂಗಳೂರು- ಹೈದರಬಾದ್‌ ಇಂಡಿಗೋ ಏರ್‌ ಲೈನ್ಸ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ -Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಮಂಗಳೂರು : ಮಂಗಳೂರು – ಹೈದರಾಬಾದ್‌ನ ಇಂಡಿಗೋ ಏರ್‌ ಲೈನ್ಸ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಟೇಕ್‌ ಆಫ್‌ ಆಗಲು ಮುಂದಾಗಿದ್ದ ವಿಮಾಣವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಂಗ್‌ ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸುವ ಸಿದ್ಧತೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿರುವ ಎಲ್ಲಾ ವಿಮಾನಗಳ ತಪಾಸಣೆ ಕಾರ್ಯ ಆರಂಭ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಿಮಾನ ಏರಿದ್ದ 126 ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ನಡೆಸಲಾಗಿದೆ.ಮತ್ತೆ ಮತ್ತೆ ಬಾಂಬ್ ಭೀತಿ ಹಿನ್ನಲೆಯಲ್ಲಿ ಬಜ್ಪೆ ವಿಮಾನನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿದೆ.