ಮಂಗಳೂರು:ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರು

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ‌ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಬೃಹತ್‌ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ‌ ರಾಮಕುಂಜದಲ್ಲಿ ನಡೆದಿದೆ.

ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ.

ಅಷ್ಟರಲ್ಲೇ ಮಾವಿನ ಮರ ಕಾರಿ‌ನ ಮೇಲೆ ಬಿದ್ದಿದೆ. ಕಾರು‌ ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರೆಡ್‌ ಅಲರ್ಟ್‌ ಜಾರಿ: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply