ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ – Vishwanews24
ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ
ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.
ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ಕರೆ ನೀಡಿದ್ದಾರೆ.
Join our Whatsapp group by clicking the below link 👇👇
