ಮಣಿಪಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ – ಪ್ರಕರಣ ದಾಖಲು – Vishwanews24
ಮಣಿಪಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ – ಪ್ರಕರಣ ದಾಖಲು
ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸುಮಾರು ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ ಹಲ್ಲೆಗೈದಿದೆ.
ಕುಂದಾಪುರ: ಅಪಾರ್ಟ್ಮೆಂಟ್ ಮಹಡಿಯಿಂದ ಅಯಾತಪ್ಪಿ ಬಿದ್ದು ಮಹಿಳೆ ಮೃತ್ಯು – Vishwanews24
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
