ಮಧ್ಯರಾತ್ರಿ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ತಹಶಿಲ್ದಾರ್ ; ಆರೋಪಿಗಳು ಪರಾರಿ -Vishwanews24
ಮಧ್ಯರಾತ್ರಿ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ತಹಶಿಲ್ದಾರ್ ; ಆರೋಪಿಗಳು ಪರಾರಿ -Vishwanews24
ಬಂಟ್ವಾಳ: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯರಾತ್ರಿ ವೇಳೆ ಅರಣ್ಯ ಅಧಿಕಾರಿಗಳ ಜೊತೆ ತಹಶಿಲ್ದಾರ್ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಅಡಿ ಭಾಗದಿಂದ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಆರೋಪದ ಮೇಲೆ ತಹಶಿಲ್ದಾರ್ ರಶ್ಮಿ. ಎಸ್.ಆರ್.ಅವರು ಗೌಪ್ಯವಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಜೊತೆ ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು ಸ್ಥಳದಲ್ಲಿ ಒಂದು ಟಿಪ್ಪರ್, ಒಂದು ದೋಣಿ ಬಿಟ್ಟು ಪರಾರಿಯಾಗಿದ್ದಾರೆ.
