ಮಲ್ಪೆ : ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24
ಮಲ್ಪೆ : ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ – ಮೇ ಅಂತ್ಯಕ್ಕೆ ಪೂರ್ಣ
ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.
ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್ಗಳಲ್ಲಿ ಮತ್ತು ನ್ಯಾವಿಗೇಶನ್ ಚಾನೆಲ್ಗಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.
ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.
ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ – Vishwanews24
