ಮಲ್ಪೆ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ : vishwanews24
ಮಲ್ಪೆ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ
ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದ ನಿವಾಸಿ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟಸಿದೆ.
ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.
ಇತ್ತೀಚೆಗೆ ವಿರಾಜ್ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ. ಮಲ್ಪೆ ಶಾಂತಿನಗರದಲ್ಲಿರುವ ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
