ಮಳೆಯ ಅಬ್ಬರ : ಕರಾವಳಿ ಜಿಲ್ಲೆಗಳಲ್ಲಿ ಜು.10ರವರೆಗೆ ರೆಡ್ ಅಲರ್ಟ್ – Vishwanews24
ಮಳೆಯ ಅಬ್ಬರ : ಕರಾವಳಿ ಜಿಲ್ಲೆಗಳಲ್ಲಿ ಜು.10ರವರೆಗೆ ರೆಡ್ ಅಲರ್ಟ್ – Vishwanews24
ಮಂಗಳೂರು : ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜು.10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ.
ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜು.7 ರಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು. ಆದರೇ ಇದೀಗ ಜು.10 ರವರೆಗೆ ಮುಂದುವರಿಯಲಿದೆ. ಈ ವೇಳೆ ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.11, 12 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ , ಪ್ರವಾಸಿಗರು ನದಿ ಹಾಗೂ ಸಮುದ್ರಕ್ಕೆ ತಗ್ಗು ಪ್ರದೇಶದತ್ತ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
