ಮಳೆಯ ಅಬ್ಬರ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ -Vishwanews24
ಮಳೆಯ ಅಬ್ಬರ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ -Vishwanews24
ಮಂಗಳೂರು/ ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಗುರುವಾರ (ಜುಲೈ 7 )ರಂದು ದಕ್ಶಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜು ಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಎರಡೂ ಜಿಲ್ಲೆಗಳಲ್ಲಿ ಮಳೆ ಕುರಿತು ರೆಡ್ ಅಲರ್ಟ್ ಇರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
